ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹ**ತ್ಯೆ ಮಾಡಿಕೊಂಡಿದ್ದಾರೆ.
ಕೇರಳ ಮೂಲದ ರಾವ್ ಅವರು ಕಾನ್ಫಿಡೆಂಟ್ ಗ್ರೂಪ್ ಎಂಬ ಪ್ರಮುಖ ರಿಯಲ್ ಎಸ್ಟೇಟ್ ಮತ್ತು ಮೂಲಸೌಕರ್ಯ ಅಭಿವೃದ್ಧಿ ಕಂಪನಿಯ ಸಂಸ್ಥಾಪಕರಾಗಿದ್ದರು. ಇಂದು ಸಂಜೆ ಬೆಂಗಳೂರಿನ ಆನೇಪಾಳ್ಯದಲ್ಲಿರೋ ತಮ್ಮ ಕಚೇರಿಯಲ್ಲಿ ರಾಯ್ ಆತ್ಮ**ತ್ಯೆ ಮಾಡಿಕೊಂಡಿದ್ದಾರೆ.
ಸದ್ಯ ಸ್ಥಳಕ್ಕೆ ಅಶೋಕನಗರ ಠಾಣೆ ಪೊಲೀಸರು ದೌಡಾಯಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಆದಾಯ ತೆರಿಗೆ ಇಲಾಖೆಯ ಪದೇ ಪದೇ ಆದ ದಾಳಿಗಳಿಂದ ಹೆದರಿ ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ಶಂಕಿಸಲಾಗಿದೆ.
ನಗರದಲ್ಲಿ ಇವರ ಹೆಸರಿನಲ್ಲಿ ಹಲವು ದೊಡ್ಡ ಹೋಟೆಲ್ಗಳು ಮತ್ತು ರೆಸಾರ್ಟ್ಗಳು ಇದ್ದವು. ಈ ಘಟನೆ ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಮೃತರಿಗೆ ಪತ್ನಿ ಲಿನಿ ರಾಯ್, ರೋಹಿತ್ ಮತ್ತು ರಿಯಾ ಎಂಬ ಇಬ್ಬರು ಮಕ್ಕಳು ಇದ್ದರು. ಮಗ ರೋಹಿತ್, ಕಾನ್ಫಿಡೆಂಟ್ ಗ್ರೂಪ್ನ ಅಂತಾರಾಷ್ಟ್ರೀಯ ವ್ಯಾಪಾರ ಮತ್ತು ವಿನ್ಯಾಸ ವಿಭಾಗವನ್ನು ನಿರ್ವಹಿಸುತ್ತಿದ್ದಾರೆ.
2005ರಲ್ಲಿ ಆರಂಭವಾದ ಈ ಸಂಸ್ಥೆ, 65ಕ್ಕೂ ಹೆಚ್ಚು ಐಷಾರಾಮಿ ಯೋಜನೆಗಳನ್ನು ಪೂರ್ಣಗೊಳಿಸಿದೆ. ವಸತಿ ಅಪಾರ್ಟ್ಮೆಂಟ್, ವಿಲ್ಲಾಗಳು, ವಾಣಿಜ್ಯ ಸಂಕೀರ್ಣಗಳು, ಶಿಕ್ಷಣ, ಆತಿಥ್ಯ ಮತ್ತು ಮನರಂಜನಾ ಕ್ಷೇತ್ರಗಳಲ್ಲಿ ಕಾನ್ಫಿಡೆಂಟ್ ಗ್ರೂಪ್ ಕಾರ್ಯನಿರ್ವಹಿಸುತ್ತಿದೆ. ಸಿಜೆ ರಾಯ್ ಅವರು ಸ್ವಿಟ್ಜರ್ಲೆಂಡ್ನ SBS ಬಿಸಿನೆಸ್ ಸ್ಕೂಲ್ನಿಂದ ಬಿಸಿನೆಸ್ ಅಡ್ಮಿನಿಸ್ಟ್ರೇಷನ್ನಲ್ಲಿ ಡಾಕ್ಟರೇಟ್ ಪಡೆದಿದ್ದರು.
ಕಾನ್ಫಿಡೆಂಟ್ ಗ್ರೂಪ್ ಎಂಬ ಸಂಸ್ಥೆ ಸ್ಥಾಪಿಸಿ, ಕೇರಳ ಮತ್ತು ಬೆಂಗಳೂರಿನಲ್ಲಿ ಪ್ರಮುಖ ಐಷಾರಾಮಿ ಯೋಜನೆಗಳನ್ನು ಪೂರ್ಣಗೊಳಿಸಿದ್ದು, ದುಬೈ ಮಾರುಕಟ್ಟೆಗೂ ವಿಸ್ತರಿಸಿದ್ದಾರೆ. ಸಿ.ಜೆ. ರಾಯ್ ಅವರು ಭಾರತದ ಶ್ರೀಮಂತ ಉದ್ಯಮಿಗಳಲ್ಲಿ ಒಬ್ಬರಾಗಿದ್ದು, ಹಲವು ಕ್ಷೇತ್ರಗಳಲ್ಲಿ ತಮ್ಮ ವ್ಯಾಪಾರ ಸಾಮ್ರಾಜ್ಯವನ್ನು ವಿಸ್ತರಿಸಿದ್ದಾರೆ. ಅಲ್ಲದೆ, ಅವರು ಸ್ಲೋವಾಕ್ ಗಣರಾಜ್ಯದ ಗೌರವ ಕಾನ್ಸಲ್ ಆಗಿಯೂ ಕರ್ನಾಟಕ ಮತ್ತು ಕೇರಳದಲ್ಲಿ ಸೇವೆ ಸಲ್ಲಿಸಿದ್ದರು.
ರಾಯ್ ಅವರು ಕಾರುಗಳ ಬಗ್ಗೆ ಅಪಾರ ಆಸಕ್ತಿ ಹೊಂದಿದ್ದು, ದುಬೈ ಮತ್ತು ಭಾರತದಲ್ಲಿ ಹಲವು ದುಬಾರಿ ಐಷಾರಾಮಿ ಮತ್ತು ಸ್ಪೋರ್ಟ್ಸ್ ಕಾರುಗಳನ್ನು ಹೊಂದಿದ್ದರು. ಕಾನ್ಫಿಡೆಂಟ್ ಗ್ರೂಪ್ 165 ಯೋಜನೆಗಳನ್ನು ಪೂರ್ಣಗೊಳಿಸಿದೆ, 43 ಮಿಲಿಯನ್ ಚದರ ಅಡಿಗಳಿಗಿಂತ ಹೆಚ್ಚು ಅಭಿವೃದ್ಧಿಪಡಿಸಿದೆ. 15,000 ಕ್ಕೂ ಹೆಚ್ಚು ಗ್ರಾಹಕರನ್ನು ಹೊಂದಿದೆ. ಉದ್ಯಮಶೀಲತೆಯ ಜೊತೆಗೆ, ಡಾ. ರಾಯ್ ಅವರು ಮನರಂಜನೆ, ಶಿಕ್ಷಣ, ಆತಿಥ್ಯ, ಗಲ್ಫ್, ಚಿಲ್ಲರೆ ವ್ಯಾಪಾರ ಮತ್ತು ಅಂತರರಾಷ್ಟ್ರೀಯ ವ್ಯಾಪಾರದಂತಹ ವಿವಿಧ ಕ್ಷೇತ್ರಗಳಲ್ಲಿಯೂ ತಮ್ಮ ವ್ಯಾಪಾರವನ್ನು ವಿಸ್ತರಿಸಿದ್ದರು.
