Gokarn| ಕುಮಟಾ ತಾಲೂಕಿನ ಗೋಕರ್ಣದ ಪ್ರವಾಸಿ ತಾಣದಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, ಘಟನೆ ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿದೆ.

ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಓಡಾಡುವ ಕುಡ್ಲೆ ಕಡಲ ತೀರದ ರಸ್ತೆಯಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಕೆಲ ಸಮಯ ಜನರು ಭಯಭೀತರಾಗಿ ಓಡಾಡಿದ ಘಟನೆ ನಡೆದಿದೆ. ರಸ್ತೆಯ ಮಧ್ಯದಲ್ಲೇ ಚಿರತೆ ಸಂಚರಿಸುತ್ತಿರುವುದು ಗಮನಿಸಿದ ಸಾರ್ವಜನಿಕರು ಆತಂಕಕ್ಕೊಳಗಾಗಿದ್ದಾರೆ‌.

ಬೇಸಿಗೆ ಸಂದರ್ಭವಾಗಿರುವುದರಿಂದ ಕಾಡು ಪ್ರಾಣಿಗಳು ನೀರು ಆಹಾರ ಅರಸಿಕೊಂಡು ನಾಡಿನತ್ತ ಬರುತ್ತದೆ. ಸ್ಥಳೀಯರು ಹಾಗೂ ಪ್ರವಾಸಿಗರು ಎಚ್ಚರಿಕೆಯಿಂದ ಇರಬೇಕೆಂದು ಅರಣ್ಯ ಅಧಿಕಾರಿಗಳು ಸೂಚಿಸಿದ್ದಾರೆ.

 ಕುಡ್ಲೆ ಸಮುದ್ರ ತೀರದ ಪ್ರದೇಶದಲ್ಲಿ ಪ್ರವಾಸಿಗರ ಹಾಗೂ ಸಾರ್ವಜನಿಕರ ಹೆಚ್ಚು ಓಡಾಟವಿರುತ್ತದೆ. ಹೀಗಾಗಿ ಕೂಡಲೇ ಅರಣ್ಯ ಇಲಾಖೆಯವರು ಬೋನಿಟ್ಟು ಚಿರತೆ ಸೆರೆಹಿಡಿದು ಬೇರೆಡೆ ಸ್ಥಳಾಂತರಿಸಲಿ ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.